

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ: ಸರ್ಕಾರದ ವಿರುದ್ಧ ಮುಗಿಬಿದ್ದ BJP, ಸಚಿವರ ಉತ್ತರ ಅಸಮರ್ಪಕ ಎಂದು ಸಭಾತ್ಯಾಗ
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ, ವೈದ್ಯರ ಅಸಮರ್ಪಕ ವರ್ಗಾವಣೆ, ಖಾಲಿ ಹುದ್ದೆಗಳ ಭರ್ತಿ ಮಾಡದಿರುವುದು ಸೇರಿ ಆರೋಗ್ಯ ಇಲಾಖೆಯಲ್ಲಿನ ದುರಾಡಳಿತ, ಅವ್ಯವಸ್ಥೆಗಳ ಕುರಿತು ಪ್ರತಿಪಕ್ಷಗಳು ಸರ್ಕಾರವನ್ನು ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡವು. ಸದಸ್ಯರ ಪ್ರಶ್ನೆ, ಆಕ್ಷೇಪ, ಆರೋಪಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಉತ್ತರ ನೀಡಿದರೂ, ಉತ್ತರ ಸಮರ್ಪಕವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ ಬೆಳವಣಿಗೆ ನಡೆಯಿತು. ಪ್ರತಿಪಕ್ಷ ಸದಸ್ಯರ ಮನವಿ ಮೇರೆಲೆ ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯದಡಿ ಆರೋಗ್ಯ ಇಲಾಖೆಯಲ್ಲಿನ ಲೋ


ಸಚಿವರಲ್ಲಿ ʼಒಳ್ಳೆ ಮಾತಿನʼ ಬಲ ತುಂಬಲು ಹೊಸ ಪದ್ಧತಿಗೆ ಮುಂದಾದ ಪ್ರಧಾನಿ!
ಪ್ರಧಾನಿ ನರೇಂದ್ರ ಮೋದಿಯವರು ಸೌತ್ ಬ್ಲಾಕ್ ನಲ್ಲಿರುವ ತಮ್ಮ ಹಳೆಯ ಪ್ರಧಾನಿ ಕಚೇರಿಯಿಂದ ಸದ್ಯ ನೂತನ ಸೇವಾತೀರ್ಥ ಭವನಕ್ಕೆ ಇತ್ತೀಚೆಗಷ್ಟೇ ಸ್ಥಳಾಂತರವಾಗಿದ್ದು, ಇಂದು ಐತಿಹಾಸಿಕ ಮೊದಲ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಈ ಸಭೆಯನ್ನು ಕೇವಲ ಔಪಚಾರಿಕವಾಗಿ ಮಾತ್ರ ನಡೆಸದೆ ಇದನ್ನು ಇನ್ನಷ್ಟು ಸ್ಪೇಷಲ್ ಮಾಡಲು ಪ್ರಧಾನಿಗಳು ಒಳ್ಳೆ ಸುದ್ದಿ ಎಂಬ ವಿನೂತನ ಪದ್ದತಿಯನ್ನು ಪ್ರಾರಂಭಿಸಲು ಮುಂದಾಗಿದ್ದು, ಇದರಲ್ಲಿ ಎಲ್ಲಾ ಸಂಪುಟ ಸದಸ್ಯರು ಸಚಿವಾಲಯಕ್ಕೆ ಸಂಬಂಧಿಸಿದ ಔಪಚಾರಿಕ ವಿಚಾರಗಳ ಕುರಿತ ಒಳ್ಳೆ ಸುದ್ದಿ ಅಥವಾ ತಮ್ಮ ವೈಯಕ್ತಿಕ ವಿಚಾರದಲ್ಲಿ ಸ್ಪೂರ್ತಿದಾಯವಾಗುವ ಒಳ್ಳೆ ಸುದ್ದಿಗಳನ್ನು






