top of page

33 ವಾರಗಳ ಬಳಿಕ ನಟ ದರ್ಶನ್ ಪೋಸ್ಟ್!

  • Writer: Ananthamurthy m Hegde
    Ananthamurthy m Hegde
  • Jan 15
  • 1 min read

ಬೆಂಗಳೂರು: ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರಿನ ತಮ್ಮ ನೆಚ್ಚಿನ ಫಾರಂ ಹೌಸ್‌ನಲ್ಲಿರುವ ನಟ ದರ್ಶನ್‌ ಸಂಭ್ರಮದಿಂದ ಮಕರ ಸಂಕ್ರಾಂತಿ ಆಚರಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬದ ಶುಭಾಶಯವನ್ನೂ ಕೋರಿದ್ದಾರೆ.

 'ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ' ಎಂದು ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ರವಾನಿಸಿದ್ದಾರೆ. ದರ್ಶನ್ ತಮ್ಮ ನೆಚ್ಚಿನ ಕುದುರೆಯೊಂದಿಗೆ ಇರುವ ಚಿತ್ರದೊಂದಿಗೆ ಶುಭಾಶಯವನ್ನು ಹಂಚಿಕೊಂಡಿದ್ದಾರೆ.

ನಟ ದರ್ಶನ್ ಪ್ರತಿ ವರ್ಷವೂ ಕೂಡ ಫಾರಂ ಹೌಸ್‌ನಲ್ಲಿ ತನ್ನ ಸಾಕು ಪ್ರಾಣಿಗಳೊಂದಿಗೆ ಸಂಕ್ರಾತಿ ಹಬ್ಬವನ್ನು ಆಚರಿಸುತ್ತಾ ಬಂದಿದ್ದಾರೆ. ಈ ಬಾರಿಯೂ ನೆಚ್ಚಿನ ಸ್ಥಳದಲ್ಲೇ ಸಂಕ್ರಾಂತಿ ಆಚರಿಸಿಕೊಂಡಿದ್ದಾರೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ನೆಚ್ಚಿನ ನಟನ ಪೋಸ್ಟ್ ಕಂಡು ಅಭಿಮಾನಿಗಳು ಖುಷಿಯಾಗಿದ್ದಾರೆ. ದರ್ಶನ್ ಪೋಸ್ಟ್ ಮಾಡುತ್ತಿದ್ದಂತೆ, ಅಭಿಮಾನಿಗಳು 'ಜೈ ಡಿ ಬಾಸ್' ಎಂದು ಕಮೆಂಟ್ ಮಾಡಿದ್ದಾರೆ.

ಫೋಟೋ ಶೇರ್ ಮಾಡಿದ ಪತ್ನಿ ವಿಜಯಲಕ್ಷ್ಮೀ

ಫಾರಂ ಹೌಸ್‌ನಲ್ಲಿ ದರ್ಶನ್ ಪತ್ನಿ ಹಾಗೂ ಮಗನೊಂದಿಗೆ ಸೇರಿ ಸಂಕ್ರಾಂತಿ ಆಚರಿಸಿದರು. ಈ ಫೋಟೋವನ್ನು ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದರ್ಶನ್‌ ಜೊತೆಗೆ ಸಾಕುಪ್ರಾಣಿಗಳನ್ನು ನೋಡುತ್ತಿರುವ ಹಿಂಬದಿಯ ಫೋಟೋವನ್ನು ಶೇರ್ ಮಾಡಿದ್ದಾರೆ. ದರ್ಶನ್ ಫಾರಂ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬ ಆಚರಣೆಗೂ ಮುನ್ನ ಮೈಸೂರಿನಲ್ಲಿ ತಾಯಿ ಮೀನಾ ತೂಗುದೀಪ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಕೆಲಕಾಲ ಸಮಯ ಕಳೆದು, ಫಾರಂ ಹೌಸ್‌ಗೆ ಹಿಂತಿರುಗಿದರು.

ಬೆಂಗಳೂರಿನಲ್ಲಿರುವ ದರ್ಶನ್ ಜ.12 ರಿಂದ ಜ.18ರ ವರೆಗೆ ಮೈಸೂರಿಗೆ ತೆರಳಲು ಅನುಮತಿ ನೀಡಬೇಕು ಎಂದು ಬೆಂಗಳೂರಿನ ನ್ಯಾಯಾಲಯದಲ್ಲಿ ತಮ್ಮ ವಕೀಲರ ಮೂಲಕ ಅನುಮತಿ ಕೇಳಿದ್ದರು. ದರ್ಶನ್ ಅವರ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ಒಂದು ವಾರ ಮೈಸೂರಿಗೆ ತೆರಳಲು ಅನುಮತಿ ನೀಡಿದ್ದರು

Comments


Top Stories

bottom of page