ಅಮಿತ್ ಶಾ ಹೇಳಿಕೆ ಖಂಡಿಸಿ ರಾಷ್ಟ್ರಪತಿಗೆ ಮನವಿ
- Ananthamurthy m Hegde
- Dec 26, 2024
- 1 min read
ಯಲ್ಲಾಪುರ: ಕೇಂದ್ರ ಗ್ರಹ ಸಚಿವ ಅಮಿತ್ ಷಾ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಕುರಿತು ನೀಡಿದ ಹೇಳಿಕೆ ಖಂಡಿಸಿ ಯಲ್ಲಾಪುರ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಅಂಬೇಡ್ಕರ್ ಸೇವಾ ಸಂಘದಿಂದ ತಹಸೀಲ್ದಾರ ಯಲ್ಲಪ್ಪ ಗೊನ್ನೆಣ್ಣವರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಜಗನ್ನಾಥ ರೇವಣಕರ್, ಪ್ರಮುಖರಾದ ಉಲ್ಲಾಸ ಶಾನಭಾಗ, ಮಾರುತಿ ಬೋವಿವಡ್ಡರ್, ಆನಿಲ ಮರಾಠೆ, ರವೀಂದ್ರ ಪಾಟಣಕರ್, ಪೂಜಾ ನೇತ್ರೇಕರ್, ಪ್ರೀತಿ ಸಿದ್ದಿ ಇತರರಿದ್ದರು.
Comments