ಚೆನ್ನೈ: ಈಗಾಗಲೇ ಮಹೇಂದ್ರ ಸಿಂಗ್ ಧೋನಿ ಅವರು ಅಲಭ್ಯರಾಗಿರುವುದರಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಐಪಿಎಲ್ 2026ರ ಸೀಸನ್ ನ ಆರಂಭದಿಂದಂಲೂ ಭರ್ಜರಿ ಫಾರ್ಮ್ನಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ಅವರು ಗಾಯದ ಕಾರಣದಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಅವರು ಈ ಸೀಸನ್ ನಲ್ಲಿ ಉಳಿದ ಪಂದ್ಯಗಳನ್ನು ಆಡಲು ಲಭ್ಯವಿಲ್ಲ ಎಂದು ಫ್ರಾಂಚೈಸಿಯು ಅಧಿಕೃತವಾಗಿ ತಿಳಿಸಿದ್ದು ಇದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಏಪ್ರಿಲ್ 18 ರಂದು ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ
ನವದೆಹಲಿ: ಪಾಕಿಸ್ತಾನ ಮೂಲದ ದರೋಡೆಕೋರ ಮತ್ತು ಐಎಸ್ಐ ವಕ್ತಾರ ಶಹಜಾದ್ ಭಟ್ಟಿ ಸೂಚನೆಯಂತೆ ಕೆಲಸ ಮಾಡುತ್ತಿದ್ದ ಇಬ್ಬರು ಭಾರತೀಯ ಐಎಸ್ಐ ಕಾರ್ಯಕರ್ತರನ್ನು ದೆಹಲಿ ಪೊಲೀಸರ ವಿಶೇಷ ತಂಡ ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿಗಳು ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಗುಂಡಿನ ದಾಳಿ, ಗ್ರೆನೇಡ್ ದಾಳಿ ಮತ್ತು ಟಾರ್ಗೆಟೆಡ್ ಹತ್ಯೆಗಳನ್ನು ನಡೆಸಲು ಸಂಚು ರೂಪಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶದ ಗ್ವಾಲಿಯರ್ ಮೂಲದ ರಾಜ್ವೀರ್ (21) ಮತ್ತು ವಿವೇಕ್ ಬಂಜಾರ(19) ಎಂದು ಗುರುತಿಸಲಾಗಿದೆ. "ದೆಹಲಿ ಪೊಲೀಸರು ಇಬ್ಬರು ISI ಕಾರ್ಯಕರ್ತರನ್ನು ಬಂಧಿಸುವ ಮ
ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ, ವೈದ್ಯರ ಅಸಮರ್ಪಕ ವರ್ಗಾವಣೆ, ಖಾಲಿ ಹುದ್ದೆಗಳ ಭರ್ತಿ ಮಾಡದಿರುವುದು ಸೇರಿ ಆರೋಗ್ಯ ಇಲಾಖೆಯಲ್ಲಿನ ದುರಾಡಳಿತ, ಅವ್ಯವಸ್ಥೆಗಳ ಕುರಿತು ಪ್ರತಿಪಕ್ಷಗಳು ಸರ್ಕಾರವನ್ನು ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡವು. ಸದಸ್ಯರ ಪ್ರಶ್ನೆ, ಆಕ್ಷೇಪ, ಆರೋಪಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಉತ್ತರ ನೀಡಿದರೂ, ಉತ್ತರ ಸಮರ್ಪಕವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ ಬೆಳವಣಿಗೆ ನಡೆಯಿತು. ಪ್ರತಿಪಕ್ಷ ಸದಸ್ಯರ ಮನವಿ ಮೇರೆಲೆ ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯದಡಿ ಆರೋಗ್ಯ ಇಲಾಖೆಯಲ್ಲಿನ ಲೋ
Comments