top of page

ತಿಮ್ಮಪ್ಪನಿಗೆ ಅರ್ಪಿಸಿದ ಅರ್ಧ ಕೆಜಿ ಚಿನ್ನ ಕಳ್ಳತನ

Writer: Ananthamurthy m Hegde
Ananthamurthy m Hegde
Jan 15, 2025
1 min read

ತಿರುಪತಿ: ಭಕ್ತರಿಂದ ತಿರುಪತಿಯ ಬಾಲಾಜಿ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ಬಂದಿದ್ದ ಸುಮಾರು ಅರ್ಧ ಕೇಜಿ ಚಿನ್ನವನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ತಿರುಮಲ ತಿರುಪತಿ ದೇವಸ್ಥಾನಮ್‌ ( ಟಿಟಿಡಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬನನ್ನುಬಂಧಿಸಿದ್ದಾರೆ.

ವಿ. ಪೆಂಚಲಯ್ಯ ಬಂಧಿತ ಆರೋಪಿ. ಈತ ಕಳೆದ ಒಂದು ವರ್ಷದಲ್ಲಿ 10 ರಿಂದ 15 ಸಲ ಚಿನ್ನದ ಬಿಸ್ಕೆಟ್‌ ಮತ್ತು ಇತರ ಆಭರಣಗಳು ಸೇರಿದಂತೆ 46 ಲಕ್ಷ ರು. ಮೌಲ್ಯದ 650 ಗ್ರಾಂ ಚಿನ್ನವನ್ನು ಕಳವು ಮಾಡಿದ ಆರೋಪ ಕೇಳಿ ಬಂದಿದೆ. ವೆಂಕಟೇಶ್ವರನ ಸನ್ನಿಧಿಗೆ ಭಕ್ತರು ನೀಡುವ ಕಾಣಿಕೆಯನ್ನು ಪರಕಾಮಣಿಯಲ್ಲಿ ವಿಂಗಡಿಸಲಾಗುತ್ತದೆ. ಅಲ್ಲಿ ಕೆಲಸ ಮಾಡುತ್ತಿದ್ದ ಪೆಂಚಲಯ್ಯ ಚಿನ್ನವನ್ನು ಕಳ್ಳತನ ಮಾಡಿದ್ದಾನೆ. ಚಿನ್ನದ ಬಿಸ್ಕೆಟ್‌ ಕದಿಯಲು ಯತ್ನಿಸುತ್ತಿದ್ದಾಗ ಆತ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದು, ಜ.12ರಂದು ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments


Top Stories

1/322
bottom of page