top of page

ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ; ಹೊಸ ರಾಷ್ಟ್ರಾಧ್ಯಕ್ಷರ ಘೋಷಣೆ?

  • Writer: Ananthamurthy m Hegde
    Ananthamurthy m Hegde
  • Mar 14
  • 1 min read

ನವದೆಹಲಿ: ಏಪ್ರಿಲ್ 18 ರಿಂದ 20 ರವರೆಗೆ ಬಿಜೆಪಿ ತನ್ನ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ ಬೆಂಗಳೂರಿನಲ್ಲಿ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಸಭೆ ನಡೆಸುವ ನಿರ್ಧಾರವು ಬಿಜೆಪಿಯ ಮಿಷನ್ ಸೌತ್ ಯೋಜನೆಗೆ ಮಹತ್ವದ ಸಂಕೇತವಾಗಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕದಂತಹ ರಾಜ್ಯಗಳಲ್ಲಿ ತನ್ನ ನೆಲೆಯನ್ನು ಬಲಪಡಿಸುವತ್ತ ಗಮನಹರಿಸುವ ಮೂಲಕ ದಕ್ಷಿಣ ಭಾರತದ ಕಡೆಗೆ ಪಕ್ಷದ ಚುನಾವಣಾ ಕಾರ್ಯತಂತ್ರದ ಬದಲಾವಣೆಯನ್ನು ಸೂಚಿಸುತ್ತದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಹೊಸ ಅಧ್ಯಕ್ಷರನ್ನು ಘೋಷಿಸುವ ಕಾರ್ಯಸೂಚಿಯೂ ಇದೆ ಎಂದು ಮೂಲಗಳು ತಿಳಿಸಿವೆ, ಹೊಸ ಮುಖ್ಯಸ್ಥರು ದಕ್ಷಿಣ ಭಾರತದಿಂದ ಬಂದವರಾಗಿರಬಹುದು ಮತ್ತು ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಪಕ್ಷದ ನೀತಿಗೆ ಅನುಗುಣವಾಗಿ ಮಹಿಳಾ ನಾಯಕರು ಮೇಲುಗೈ ಸಾಧಿಸಬಹುದು ಎಂದು ಹೇಳಲಾಗುತ್ತಿದೆ.

ಬಿಜೆಪಿಯ ಆಂಧ್ರ ಘಟಕದ ಮುಖ್ಯಸ್ಥೆ ದಗ್ಗುಬತಿ ಪುರಂದೇಶ್ವರಿ ಅವರನ್ನು ಮಹಿಳಾ ನಾಯಕಿಯರಲ್ಲಿ ಒಬ್ಬರು ಎಂದು ಪರಿಗಣಿಸಲಾಗುತ್ತಿದೆ. ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಭೂಪೇಂದ್ರ ಯಾದವ್ ಮತ್ತು ಧರ್ಮೇಂದ್ರ ಪ್ರಧಾನ್ ಅವರ ಹೆಸರುಗಳು ಇತರರ ಹೆಸರುಗಳು ಕೇಳಿ ಬರುತ್ತಿವೆ. ಡಾ. ಸುಧಾ ಯಾದವ್, ವಿನೋದ್ ತಾವ್ಡೆ, ತರುಣ್ ಚುಗ್ ಮತ್ತು ಅರುಣ್ ಕುಮಾರ್ ಕೂಡ ರೇಸ್‌ನಲ್ಲಿದ್ದಾರೆ. ಸರ್ಬಾನಂದ ಸೋನೋವಾಲ್ ಮತ್ತು ಕಿರಣ್ ರಿಜಿಜು ಜೊತೆಗೆ ಸಂಜಯ್ ಜೋಶಿ ಮತ್ತು ರಾಮ್ ಮಾಧವ್ ಅವರನ್ನು ಪಕ್ಷದ ಉನ್ನತ ಹುದ್ದೆಗೆ ಪರಿಗಣಿಸಲಾಗುತ್ತದೆ ಎಂಬ ಊಹಾಪೋಹಗಳೂ ಇವೆ.

Comentários


Top Stories

bottom of page