top of page

ಬಿಹಾರ ಚುನಾವಣೆಗೂ ಮುನ್ನ ಸೋಲೊಪ್ಪಿಕೊಂಡ ರಾಹುಲ್‌: ಮ್ಯಾಚ್‌ ಫಿಕ್ಸಿಂಗ್‌ ಹೇಳಿಕೆಗೆ ಫಡ್ನವೀಸ್‌ ಲೇವಡಿ

  • Writer: Ananthamurthy m Hegde
    Ananthamurthy m Hegde
  • 12 minutes ago
  • 1 min read

ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಮ್ಯಾಚ್ ಫಿಕ್ಸಿಂಗ್, ಬಿಹಾರ ಚುನಾವಣೆಯಲ್ಲೂ ಇದೇ ಪುನಾರವರ್ತಿಸಬಹುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿರುಗೇಟು ನೀಡಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಮಹಾರಾಷ್ಟ್ರದ ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ಇದರಿಂದಾಗಿ ಅವರು ಯುದ್ಧಕ್ಕೆ ಮುಂಚೆಯೇ ಸೋಲು ಒಪ್ಪಿಕೊಂಡಂತೆ ಆಗಿದೆ. ಅಂದರೆ ಬಿಹಾರ ವಿಧಾನಸಭೆ ಚುನಾವಣೆಯಲ್ಲಿಯೂ ಸೋಲನುಭವಿಸುತ್ತಾರೆ ಎಂದು ಅವರಿಗೆ ಮನದಟ್ಟಾಗಿದೆ ಎಂದು ದೇವೆಂದ್ರ ಫಡ್ನವೀಸ್‌ ಅವರು ಲೇವಡಿ ಮಾಡಿದ್ದಾರೆ.

ದೇಶದಲ್ಲಿ ಸುಳ್ಳು ಮಾಹಿತಿ ಹರಡುತ್ತಿದ್ದಾರೆ:

"ಪ್ರಜಾಪ್ರಭುತ್ವ ಪ್ರಕ್ರಿಯೆ ಮತ್ತು ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುವ ಮೂಲಕ ದೇಶವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದೀರಿ? ಯಾವ ರೀತಿಯ ವಿಷವನ್ನು ಹರಡುತ್ತಿದ್ದೀರಿ? ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಫಡ್ನವೀಸ್ ಅವರು ಪ್ರಶ್ನಿಸಿದ್ದಾರೆ.

ಸೋತ ನೋವು ನಿಮ್ಮನ್ನು ಕಾಡುತ್ತಿರುವುದು ಗೊತ್ತಿದೆ

ಮಹಾರಾಷ್ಟ್ರದಲ್ಲಿ ಸೋತಿದ್ದು ನಿಮಗೆ ಎಷ್ಟು ನೋವುಂಟು ಮಾಡಿರಬಹುದು ಎಂದು ನನಗೆ ಅರ್ಥವಾಗುತ್ತದೆ. ಆದರೆ ರೈತರು, ಮಹಿಳೆಯರು, ನಾಗರಿಕರು ಮತ್ತು ಮಹಾರಾಷ್ಟ್ರದ ಜನರನ್ನು ಹೀಗೆ ಅವಮಾನಿಸುವುದನ್ನು ಮುಂದುವರಿಸಿದರೆ, ರಾಜ್ಯದ ಜನರು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ. ಮುಖ್ಯಮಂತ್ರಿಯಾಗಿ ಮತ್ತು ಜನರ ಸೇವಕನಾಗಿ, ಮಹಾರಾಷ್ಟ್ರದ ಜನರಿಗೆ ಮಾಡುವ ಇಂತಹ ಅವಮಾನವನ್ನು ನಾನು ಖಂಡಿಸುತ್ತೇನೆ ಎಂದು ದೇವೇಂದ್ರ ಫಡ್ನವೀಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಜನರನ್ನು ಅವಮಾನಿಸುತ್ತಿದ್ದಾರೆ

ರಾಹುಲ್ ಗಾಂಧಿ ಅವರು ಬಿಹಾರ ಸೇರಿದಂತೆ ಮುಂಬರುವ ವಿಧಾನಸಭೆ ಚುನಾವಣೆಗಳಲ್ಲಿ ಸೋಲಿಗೆ ಈಗಿನಿಂದಲೇ ನೆಪಗಳನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ಫಡ್ನವೀಸ್ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವವನ್ನು ಟೀಕಿಸುತ್ತಿದ್ದಾರೆ. ಜನರು ಅವರನ್ನು ತಿರಸ್ಕರಿಸಿದ್ದರೂ, ಅವರು ಟೀಕೆ ಮಾಡುವುದನ್ನು ನಿಲ್ಲಿಸಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷವು ಮತ್ತಷ್ಟು ಕೆಳಕ್ಕೆ ಹೋಗುತ್ತದೆ ಎಂದು ಫಡ್ನವೀಸ್ ಅಭಿಪ್ರಾಯಪಟ್ಟಿದ್ದಾರೆ. ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ಬಗ್ಗೆಯೂ ಟೀಕೆ ಮಾಡಿದ್ದಾರೆ. ಚುನಾವಣಾ ಆಯೋಗವು ಸ್ವತಂತ್ರ ಸಂಸ್ಥೆಯಾಗಿದ್ದು, ಅದರ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಎಂದು ಫಡ್ನವೀಸ್ ಹೇಳಿದ್ದಾರೆ.

"ನಾಚಿಕೆಗೆಟ್ಟು ಸುಳ್ಳು ಹೇಳುತ್ತಿದ್ದಾರೆ" ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಟೀಕಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಭರ್ಜರಿ ಜಯಗಳಿಸಿದೆ. 288 ಸ್ಥಾನಗಳಲ್ಲಿ 235 ಸ್ಥಾನಗಳನ್ನು ಗೆದ್ದಿದೆ. ಮಹಾ ವಿಕಾಸ್ ಅಘಾಡಿಯ ಯಾವ ಪಕ್ಷವೂ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ 16 ಸ್ಥಾನ, ಶಿವಸೇನೆ (ಯುಬಿಟಿ) 20 ಸ್ಥಾನ ಮತ್ತು ಎನ್‌ಸಿಪಿ 10 ಸ್ಥಾನಗಳನ್ನು ಪಡೆದಿವೆ. ಆರು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಹೀಗಾಗಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಜಾಪ್ರಭುತ್ವಕ್ಕೆ ವಂಚಿಸುವ ನೀಲನಕ್ಷೆ. ಮುಂದಿನ ಬಿಹಾರ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಇದೇ ತಂತ್ರವನ್ನು ಪ್ರಯೋಗಿಸಬಹುದು. ಮ್ಯಾಚ್‌ ಫಿಕ್ಸಿಂಗ್‌ ಮಹಾರಾಷ್ಟ್ರ ಎಂದು ಉಲ್ಲೇಖಿಸಿ 'ಎಕ್ಸ್‌'ನಲ್ಲಿ ರಾಹುಲ್‌ ಗಾಂಧಿ ಪೋಸ್ಟ್‌ ಹಂಚಿಕೊಂಡಿದ್ದರು.

Comentarios


Top Stories

bottom of page