top of page

ಭದ್ರತಾ ಪಡೆ ಕಾರ್ಯಾಚರಣೆ : ಓರ್ವ ಉಗ್ರನ ಹತ್ಯೆ

Writer: Ananthamurthy m Hegde
Ananthamurthy m Hegde
Dec 3, 2024
1 min read


ಶ್ರೀನಗರ: ಶ್ರೀನಗರದ ದಚಿಗಂ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಉದ್ಯಾನವನದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮಂಗಳವಾರ ಓರ್ವ ಭಯೋತ್ಪಾದಕ ಮೃತಪಟ್ಟಿದ್ದಾನೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಗುಪ್ತಚರ ಮಾಹಿತಿ ಆಧಾರದ ಮೇಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದ ಹರ್ವಾನ್‌ನಲ್ಲಿ ಡಿಸೆಂಬರ್ 2 ರಂದು ಜಂಟಿ ಕಾರ್ಯಾಚರಣೆ ಆರಂಭಿಸಿದ್ದರು. ಸದ್ಯ ಒಬ್ಬ ಭಯೋತ್ಪಾದ ಮೃತಮಟ್ಟಿರುವುದು ಖಚಿತವಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಉಗ್ರರೂ ಗುಂಡಿನ ದಾಳಿ ನಡೆಸಿದ್ದಾರೆ.

ಬಾರಾಮುಲ್ಲಾ ಪೊಲೀಸರು ನವೆಂಬರ್ 23 ರಂದು ಭದ್ರತಾ ಪಡೆಗಳೊಂದಿಗೆ ಜಂಟಿ ಕಾರ್ಯಾಚರಣೆ ಕೈಗೊಂಡು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕುಂಜರ್ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಪತ್ತೆ ಹಚ್ಚಿದ್ದರು. ಬಳಿಕ ಪೊಲೀಸರು ವಿವಿಧ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡು, ಅಡಗುತಾಣವನ್ನು ನಾಶಪಡಿಸಿದ್ದರು.

Comments


Top Stories

1/322
bottom of page