top of page

ಭಯೋತ್ಪಾದನೆ, ಒಳನುಸುಳುವಿಕೆ, ಧಾರ್ಮಿಕ ಉದ್ವಿಗ್ನತೆ ವಿರುದ್ಧ ಹೋರಾಟ ಮುಂದುವರಿಯಲಿದೆ: ಅಮಿತ್ ಶಾ

  • Oct 21, 2024
  • 2 min read

ಸ್ವಾತಂತ್ರ್ಯ ನಂತರ ಇದುವರೆಗೆ 36,438 ಪೊಲೀಸ್ ಸಿಬ್ಬಂದಿ ದೇಶದ ಸುರಕ್ಷತೆ ಮತ್ತು ಭದ್ರತೆಗಾಗಿ ಹುತಾತ್ಮರಾಗಿದ್ದಾರೆ. ಕಳೆದ ವರ್ಷವೇ 216 ಮಂದಿ ಪ್ರಾಣ ಅರ್ಪಿಸಿದ್ದಾರೆ ಎಂದರು. ದೇಶದ ಅಭಿವೃದ್ಧಿ ಪಯಣದಲ್ಲಿ ಅವರ ತ್ಯಾಗಕ್ಕೆ ದೇಶ ಎಂದೆಂದಿಗೂ ಚಿರಋಣಿಯಾಗಿದೆ ಎಂದರು.


ree










ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಭಾಗಗಳು ಮತ್ತು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ದೇಶವು ಇತ್ತೀಚೆಗೆ ಶಾಂತಿಸ್ಥಿತಿ ಮರಳುತ್ತಿದ್ದರೂ ಸಹ ಭಯೋತ್ಪಾದನೆ, ಒಳನುಸುಳುವಿಕೆ ಮತ್ತು ಧಾರ್ಮಿಕ ಉದ್ವಿಗ್ನತೆಯನ್ನು ಸೃಷ್ಟಿಸುವ ಪಿತೂರಿ ವಿರುದ್ಧದ ಹೋರಾಟ ಮುಂದುವರಿಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇಂದು ಪೊಲೀಸ್ ಸ್ಮರಣಾರ್ಥ ದಿನದ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪೊಲೀಸ್ ಹುತಾತ್ಮರ ತ್ಯಾಗ ವ್ಯರ್ಥವಾಗುವುದಿಲ್ಲ. 2047 ರ ವೇಳೆಗೆ ದೇಶವು ಖಂಡಿತವಾಗಿಯೂ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ.

ಕಳೆದ 10 ವರ್ಷಗಳಲ್ಲಿ, ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಪ್ರದೇಶ ಮತ್ತು ಎಡಪಂಥೀಯ ಉಗ್ರವಾದ ಪೀಡಿತ ಪ್ರದೇಶಗಳಲ್ಲಿ ಇತ್ತೀಚೆಗೆ ಶಾಂತಿಯನ್ನು ಸ್ಥಾಪಿಸಲಾಗಿದೆ. ಆದರೂ ನಮ್ಮ ಹೋರಾಟ ಮುಗಿದಿಲ್ಲ. ಮಾದಕ ದ್ರವ್ಯ, ಸೈಬರ್ ಕ್ರೈಮ್, ಧಾರ್ಮಿಕ ಉದ್ವಿಗ್ನತೆ, ಒಳನುಸುಳುವಿಕೆ ಮತ್ತು ಭಯೋತ್ಪಾದನೆಯನ್ನು ಸೃಷ್ಟಿಸುವ ಪಿತೂರಿಯ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.

ಸ್ವಾತಂತ್ರ್ಯ ನಂತರ ಇದುವರೆಗೆ 36,438 ಪೊಲೀಸ್ ಸಿಬ್ಬಂದಿ ದೇಶದ ಸುರಕ್ಷತೆ ಮತ್ತು ಭದ್ರತೆಗಾಗಿ ಹುತಾತ್ಮರಾಗಿದ್ದಾರೆ. ಕಳೆದ ವರ್ಷವೇ 216 ಮಂದಿ ಪ್ರಾಣ ಅರ್ಪಿಸಿದ್ದಾರೆ ಎಂದರು. ದೇಶದ ಅಭಿವೃದ್ಧಿ ಪಯಣದಲ್ಲಿ ಅವರ ತ್ಯಾಗಕ್ಕೆ ದೇಶ ಎಂದೆಂದಿಗೂ ಚಿರಋಣಿಯಾಗಿದೆ ಎಂದರು.

ಹುತಾತ್ಮರ ಕುಟುಂಬ ಸದಸ್ಯರಿಗೆ ಅವರ ತ್ಯಾಗ ವ್ಯರ್ಥವಾಗುವುದಿಲ್ಲ. ಯಾವುದೇ ಸವಾಲು ಎದುರಾದರೂ ದೇಶವು ಸುರಕ್ಷಿತವಾಗಿ ಉಳಿದು ತನ್ನ ಗುರಿಯನ್ನು ಸಾಧಿಸುತ್ತದೆ. 2047 ರ ವೇಳೆಗೆ ಭಾರತವು ಖಂಡಿತವಾಗಿಯೂ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಹೇಳಿದರು.

ಜುಲೈ 1 ರಿಂದ ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಉಲ್ಲೇಖಿಸಿದ ಶಾ, ಹೊಸ ಕಾನೂನುಗಳ ಅನುಷ್ಠಾನಕ್ಕಾಗಿ ಮೂಲಸೌಕರ್ಯಗಳನ್ನು ಸ್ಥಾಪಿಸುವ ಕೆಲಸವು ಐದು ವರ್ಷಗಳ ಹಿಂದೆ ಪ್ರಾರಂಭವಾಯಿತು. ಉಳಿದ ಕೆಲಸವನ್ನು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ವಿಶ್ವದಲ್ಲೇ ಅತ್ಯಂತ ಆಧುನಿಕವಾಗಿದೆ. ಎಫ್‌ಐಆರ್ ದಾಖಲಾದ ಮೂರು ವರ್ಷಗಳಲ್ಲಿ ಸುಪ್ರೀಂ ಕೋರ್ಟ್‌ನವರೆಗೆ ಸಂಪೂರ್ಣ ನ್ಯಾಯವನ್ನು ತಲುಪಿಸಬಹುದು ಎಂದರು.

ಪೊಲೀಸ್ ಸಿಬ್ಬಂದಿಯ ಕಲ್ಯಾಣಕ್ಕಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಗಳನ್ನು ನೀಡಿದ ಗೃಹ ಸಚಿವರು, ಆಯುಷ್ಮಾನ್ ಸಿಎಪಿಎಫ್' ಯೋಜನೆಯ ಅನುಷ್ಠಾನದ ನಂತರ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ಯಾವುದೇ ಆಯುಷ್ಮಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.

ಸಿಎಪಿಎಫ್ ಸಿಬ್ಬಂದಿಯ ವಸತಿ ತೃಪ್ತಿಯನ್ನು ಹೆಚ್ಚಿಸಲು, 13,000 ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಅದರಲ್ಲಿ 11,276 ಮುಂದಿನ ವರ್ಷ ಮಾರ್ಚ್ ವೇಳೆಗೆ ಸಿದ್ಧವಾಗಲಿದೆ ಎಂದು ಅವರು ಹೇಳಿದರು.

ದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ತಮ್ಮ ಭಾಷಣದ ಮೊದಲು, ಶಾ ಅವರು ಕರ್ತವ್ಯದ ಸಾಲಿನಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಪುಷ್ಪ ನಮನ ಸಲ್ಲಿಸಿದರು.

ಅಕ್ಟೋಬರ್ 21, 1959 ರಂದು, ಲಡಾಖ್‌ನ ಹಾಟ್ ಸ್ಪ್ರಿಂಗ್ಸ್‌ನಲ್ಲಿ ಭಾರಿ ಶಸ್ತ್ರಸಜ್ಜಿತ ಚೀನೀ ಪಡೆಗಳು ಹೊಂಚುದಾಳಿ ನಡೆಸಿದ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ 10 ಪೊಲೀಸರು ಹುತಾತ್ಮರಾಗಿದ್ದರು.

Comments


Top Stories

bottom of page