ಮಹಾಕುಂಭದಲ್ಲಿ ಬಾಂಬ್ ಬೆದರಿಕೆ, ಸೆಕ್ಷನ್ 163 ಜಾರಿ
- Ananthamurthy m Hegde
- Jan 18
- 1 min read
ಮಹಾಕುಂಭ ಮೇಳದಲ್ಲಿ ಶುಕ್ರವಾರ ಮಧ್ಯಾಹ್ನ ಬಾಂಬ್ ಇದೆ ಅಂತ ಸುದ್ದಿ ಹಬ್ಬಿ ಪೊಲೀಸ್ ಇಲಾಖೆ ತಲ್ಲಣಗೊಂಡಿತು. ಸುದ್ದಿ ಸಿಗ್ತಿದ್ದಂಗೆ ಪೊಲೀಸರು ಕಾರ್ಯಪ್ರವೃತ್ತರಾಗಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್), ವಿಧ್ವಂಸಕ ಕೃತ್ಯ ತಡೆ ತಂಡ (ಎಎಸ್ ಚೆಕ್) ಸೇರಿದಂತೆ ಹಲವು ತಂಡಗಳು ಸೆಕ್ಟರ್-18 ತಲುಪಿದವು. ಭದ್ರತಾ ಸಂಸ್ಥೆಗಳು ಸಂಪೂರ್ಣ ಪ್ರದೇಶವನ್ನು ಸುತ್ತುವರಿದು ಪರಿಶೀಲನೆ ಆರಂಭಿಸಿದವು, ಇದರಿಂದಾಗಿ ಅಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಸಾಕಷ್ಟು ತನಿಖೆ ನಡೆಸಿದ ನಂತರ, ಈ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ. ಈಗ ಹಬ್ಬಗಳು ಮತ್ತು ಪ್ರಮುಖ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಭಾರತೀಯ ನಾಗರಿಕ ರಕ್ಷಣಾ ಸಂಹಿತೆಯ 163ನೇ ಕಲಂ ಅನ್ನು ಜಾರಿಗೊಳಿಸಲಾಗಿದೆ.

ಪ್ರಯಾಗ್ರಾಜ್ನಲ್ಲಿ 163ನೇ ಕಲಂ ಜಾರಿ: ಮಹಾಕುಂಭ, ಗಣರಾಜ್ಯೋತ್ಸವ, ಮೌನಿ ಅಮಾವಾಸ್ಯೆ, ವಸಂತ ಪಂಚಮಿ, ಸಂತ ರವಿ ದಾಸ್ ಜಯಂತಿ, ಮಹಾಶಿವರಾತ್ರಿ ಮತ್ತು ಇತರ ಪ್ರಮುಖ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಭಾರತೀಯ ನಾಗರಿಕ ರಕ್ಷಣಾ ಸಂಹಿತೆಯ (ಸಿಆರ್ಪಿಸಿ) 163ನೇ ಕಲಂ ಅನ್ನು ಜನವರಿ 16 ರಿಂದ ಫೆಬ್ರವರಿ 28, 2025 ರವರೆಗೆ ಜಾರಿಗೊಳಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಎನ್. ಕೊಲಾಂಚಿ ಅವರು, ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಅವಧಿಯಲ್ಲಿ ಮೆರವಣಿಗೆ ಮತ್ತು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಉಲ್ಲಂಘನೆಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ, ಜನರಿಗೆ ಈ ಆದೇಶದ ಬಗ್ಗೆ ಅರಿವು ಮೂಡಿಸಲು ವಿಶೇಷ ಅಭಿಯಾನವನ್ನೂ ನಡೆಸಲಾಗುವುದು.
ಭಾರತೀಯ ನಾಗರಿಕ ರಕ್ಷಣಾ ಸಂಹಿತೆ (163ನೇ ಕಲಂ) ಅನ್ನು ಮೊದಲ ಬಾರಿಗೆ ಜುಲೈ 1, 2023 ರಂದು ಜಾರಿಗೊಳಿಸಲಾಗಿತ್ತು. ಇದನ್ನು ಈ ಹಿಂದೆ ಭಾರತೀಯ ದಂಡ ಸಂಹಿತೆಯ (ಸಿಆರ್ಪಿಸಿ) 144ನೇ ಕಲಂ ಎಂದು ಕರೆಯಲಾಗುತ್ತಿತ್ತು.
ಈ ವಸ್ತುಗಳ ಮೇಲೆ ನಿಷೇಧ : 163ನೇ ಕಲಂ ಅಡಿಯಲ್ಲಿ ಜಿಲ್ಲೆಯಲ್ಲಿ ಹಲವು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ, ಇದರಿಂದಾಗಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಬಹುದು. ಚೈನೀಸ್ ಮಾಂಜಾ ಬಳಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಡ್ರೋನ್ ಹಾರಿಸಲು ಆಡಳಿತದ ಅನುಮತಿ ಕಡ್ಡಾಯ. ಸಿಖ್ ಸಮುದಾಯದ ಕೃಪಾಣ ಮತ್ತು ದಿವ್ಯಾಂಗರಿಗೆ ಸಹಾಯಕ ದಂಡವನ್ನು ಹೊರತುಪಡಿಸಿ ಯಾವುದೇ ರೀತಿಯ ಆಯುಧಗಳು, ಲಾಠಿ-ಕೋಲುಗಳನ್ನು ನಿಷೇಧಿಸಲಾಗಿದೆ.
ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಲಾಗಿದೆ. ಸಾರ್ವಜನಿಕ ರಸ್ತೆಗಳಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಪರೀಕ್ಷೆಗಳ ಸಮಯದಲ್ಲಿ ಪರೀಕ್ಷಾ ಕೇಂದ್ರದ 200 ಗಜಗಳ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷಿದ್ಧ, ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಜನಸಂದಣಿ ಸೇರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದಲ್ಲದೆ, ಪರೀಕ್ಷಾ ಕೇಂದ್ರದ ಬಳಿ ಫೋಟೊಕಾಪಿ ಯಂತ್ರಗಳನ್ನು ನಿರ್ವಹಿಸುವುದನ್ನೂ ನಿಷೇಧಿಸಲಾಗಿದೆ.
ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರು ಮತ್ತು ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ನಿರ್ಬಂಧಗಳ ಉದ್ದೇಶ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವುದು.















Comments