top of page

ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಚರ್ಚೆ

  • Writer: Ananthamurthy m Hegde
    Ananthamurthy m Hegde
  • Jun 26
  • 1 min read
ree

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಅಧ್ಯಕ್ಷರ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ   ಮತ್ತು ವಿಪಕ್ಷ ನಾಯಕ ಆರ್​​. ಅಶೋಕ್​ ಅವರ ನಾಯಕತ್ವದ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಪಕ್ಷದ ರೆಬೆಲ್ ಗುಂಪು ಮತ್ತೊಮ್ಮೆ ಆ್ಯಕ್ಟಿವ್​ ಆಗಿದೆ. ಸಾಲು ಸಾಲು ಸಭೆ ನಡೆಸಲು ಮುಂದಾಗಿದ್ದಾರೆ. 

ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟದ ಮೇಲೆ ಮೊದಲಿನಿಂದಲೂ ತುಂಬಾ ಜನರಿಗೆ ಕಣ್ಣಿದೆ. ಅದರಲ್ಲೂ ರೆಬೆಲ್ಸ್​​ ಟೀಂ ಕುಟುಂಬ ರಾಜಕೀಯ ಅಂತ ವಾಗ್ದಾಳಿ ಮಾಡಿ, ವಿಜಯೇಂದ್ರರನ್ನು ಕೆಳಗಿಳಸಬೇಕೆಂದು ಭಾರಿ ಕಸರತ್ತು ನಡೆಸುತ್ತಿವೆ. ಇದೀಗ ಮತ್ತೊಮ್ಮೆ ಅದಕ್ಕೆ ಪುಷ್ಠಿ ನೀಡಿದಂತಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಿ, ಹೊಸ ನಾಯಕನನ್ನು ಆಯ್ಕೆ ಮಾಡಲು ರೆಬೆಲ್ ಗುಂಪು ತಂತ್ರಗಾರಿಕೆಯನ್ನು ರೂಪಿಸುತ್ತಿದೆ. ಈ ಸಂಬಂಧ ಬೆಂಗಳೂರಿನ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ನಿವಾಸದಲ್ಲಿ ರೆಬೆಲ್ ನಾಯಕರ ಸಭೆ ನಡೆದಿದ್ದು, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದಾರೆ.

Comments


Top Stories

bottom of page